Saturday 6 August, 2011

ದೇಶದ ಮೊದಲ ಖಾಸಗಿ ರೇಡಿಯೋ ಕೇಂದ್ರ ಸ್ಥಾಪನೆಯ ರೂವಾರಿ......

ಡಾ:ಎಂ.ವಿ.ಗೋಪಾಲಸ್ವಾಮಿ

ಕರ್ನಾಟಕ ಹಲವು ರಂಗಗಳಲ್ಲಿ ಪ್ರಥಮ. ಎಲ್ಲ ಭಾರತೀಯ ಭಾಷೆಗಳಲ್ಲಿ ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಯ ಗರಿ ಇರುವುದು ಕನ್ನಡಕ್ಕೆ. ದೇಶದಲ್ಲೇ ಮೊದಲ ಬಾರಿ ವಿದ್ಯುಚ್ಚಕ್ತಿ ಬೆಳಕು ಕ೦ಡ ನಗರ ಬೆ೦ಗಳೂರು. ಅ೦ತೆಯೇ ದೇಶದ ಮೊದಲ ಬಾನುಲಿ ರೇಡಿಯೋ ಕೇ೦ದ್ರ ಸ್ಥಾಪನೆಯಾಗಿದ್ದು ಮೈಸೂರಿನಲ್ಲಿ. ಮೈಸೂರು ವಿಶ್ವವಿದ್ಯಾನಿಲಯದ ಮನಃಶಾಸ್ತ್ರ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಡಾ.ಎಂ.ವಿ.ಗೋಪಾಲಸ್ವಾಮಿಯವರಿಗೆ ರೇಡಿಯೋ ಕೇ೦ದ್ರ ಸ್ಥಾಪಿಸುವ ಹುಮ್ಮಸ್ಸು ಬ೦ದು ಬಿಟ್ಟಿತ್ತು. ಮನಶಾಸ್ತ್ರಕ್ಕೂ ರೇಡಿಯೋಗೂ ಎತ್ತಣಿ೦ದೆತ್ತಣ ಸ೦ಬ೦ಧವಯ್ಯಾ? ಎನ್ನದಿರಿ. ಅವು 1935 ರ ದಿನಗಳು. ಕಾಲೇಜು ಮುಗಿಸಿ ಬ೦ದ ಗೋಪಾಲಸ್ವಾಮಿಯವರಿಗೆ ಹೊಸತನ್ನೇನಾದರೂ ಮಾಡಬೇಕು ಎ೦ಬ ಹುಮ್ಮಸ್ಸು.


ತಮ್ಮ ಒ೦ಟಿಕೊಪ್ಪಲಿನ ಮನೆಯಲ್ಲಿ 30 ವ್ಯಾಟ್ ನಷ್ಟು ಕಿರು ಸಾಮರ್ಥ್ಯದ ಪ್ರೇಷಕ (ಟ್ರಾನ್ಸ್ಫಾರ್ಮರ್)ವೊಂದನ್ನು ಸ್ಥಾಪಿಸಿ ಭಾನುವಾರ ಹೊರತುಪಡಿಸಿ ಉಳಿದ ಎಲ್ಲಾ ದಿನಗಳಲ್ಲಿ ಪ್ರತಿ ದಿನ ಸಂಜೆ 6 ರಿಂದ 8.30ರವರೆಗೆ ಶಾಸ್ತ್ರೀಯ ಸಂಗೀತ ಹಾಗೂ ಬಾನುಲಿ ಭಾಷಣಗಳನ್ನು ಪ್ರಸಾರ ಮಾಡುತ್ತಿದ್ದರು. ನಂತರ 250 ವ್ಯಾಟ್ ಸಾಮರ್ಥ್ಯದ ಪ್ರೇಷಕ ಸ್ಥಾಪಿಸಿ ಮೈಸೂರಿನ ಸುತ್ತಮುತ್ತ 25 ಕಿ.ಮೀ. ವ್ಯಾಪ್ತಿಯಲ್ಲಿ ಕಾರ್ಯಕ್ರಮಗಳನ್ನು ಕೇಳಲು ಅನುವು ಮಾಡಲಾಗಿತ್ತು. ಈ ಬಾನುಲಿ ಕೇಂದ್ರ ಪ್ರಸಾರ ಪ್ರಕ್ರಿಯೆಯನ್ನು ಜನಪ್ರಿಯಗೊಳಿಸವು ‘ಆಕಾಶವಾಣಿ’ ಪದವನ್ನು ಮೊಟ್ಟಮೊದಲಿಗೆ ಪ್ರಯೋಗಿಸಿತು. ಆಗ ನಾ.ಕಸ್ತೂರಿಯವರು "ಆಕಾಶವಾಣಿ" ಎ೦ಬ ಹೆಸರನ್ನು ಸೂಚಿಸಿದರು. ಮೈಸೂರು ನಗರಪಾಲಿಕೆಯಿಂದ ಸಣ್ಣ ಪ್ರಮಾಣದಲ್ಲಿ ಅನುದಾನ ಡಪೆದು ಕಾರ್ಯ ನಿರ್ವಹಿಸುತ್ತಿದ್ದ ಮೈಸೂರು ಆಕಾಶವಾಣಿ ಕೇಂದ್ರವನ್ನು 1942ರಲ್ಲಿ ಅಂದಿನ ಮೈಸೂರು ಮಹಾರಾಜರು ತಮ್ಮ ವಶಕ್ಕೆ ತೆಗೆದುಕೊಂಡರು. 1950ರಲ್ಲಿ ಸಂವಿಧಾನ ಅಳವಡಿಕೆಯೊಂದಿಗೆ ಪ್ರಸಾರ ಸೇವೆಗಳನ್ನು ಕೇಂದ್ರೀಯ ಹತೋಟಿಗೆ ಒಳಪಡಿಸಲಾಯಿತು. ಆಲ್ ಇಂಡಿಯಾ ರೇಡಿಯೊ ದೇಶದ ಏಕೈಕ ಪ್ರಸಾರ ವ್ಯವಸ್ಥೆಯಾಗಿ ಹೊರಹೊಮ್ಮಿತು. ಆಕಾಶವಾಣಿ ಮೈಸೂರು ಹಾಗೂ ಇನ್ನಿತರ ಖಾಸಗಿ ಕೇಂದ್ರಗಳನ್ನು ಆಲ್ ಇಂಡಿಯಾ ರೇಡಿಯೊನೊಂದಿಗೆ ವಿಲೀನಗೊಳಿಸಲಾಯಿತು. 1950ರ ದಶಕದ ಪ್ರಾರಂಭದಲ್ಲಿ ಕರ್ನಾಟಕದಲ್ಲಿದ್ದ ಏಕೈಕ ಬಾನುಲಿ ಪ್ರಸಾರ ಕೇಂದ್ರವೆಂದರೆ ಆಕಾಶವಾಣಿ ಮೈಸೂರು ಕಡಿಮೆ ಸಾಮರ್ಥ್ಯ ಪ್ರೇಷಕದೊಂದಿಗೆ ಪ್ರಸಾರ ಮಾಡುತ್ತಿದ್ದದು ಹೆಗ್ಗಳಿಕೆ .


No comments:

Post a Comment